Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:19 - ಕನ್ನಡ ಸತ್ಯವೇದವು C.L. Bible (BSI)

19 ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವುದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:19
23 ತಿಳಿವುಗಳ ಹೋಲಿಕೆ  

ದ್ವೀಪಗಳು ಕಣ್ಮರೆ ಆದವು; ಬೆಟ್ಟಗಳು ನೆಲಸಮವಾದವು.


ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು