Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:10 - ಕನ್ನಡ ಸತ್ಯವೇದವು C.L. Bible (BSI)

10 ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:10
13 ತಿಳಿವುಗಳ ಹೋಲಿಕೆ  

ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.


ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.


“ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.


ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು