Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:11 - ಕನ್ನಡ ಸತ್ಯವೇದವು C.L. Bible (BSI)

11 “ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ನಾನು ಇಸ್ರಾಯೇಲಿನೊಳಗೆ ಲವಣ ಸಮುದ್ರದ ಮೂಡಣ ದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ತಗ್ಗನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ಗೋಗನ ಸಮೂಹದ ತಗ್ಗು ಅನ್ನಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:11
10 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.


“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:


ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ಇಸ್ರಯೇಲರು ನಾಡನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.


ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವುದು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು