Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:21 - ಕನ್ನಡ ಸತ್ಯವೇದವು C.L. Bible (BSI)

21 “ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡಿಸಿದವನು ನಾನೇ ಎಂಬದು ಆ ಜನಾಂಗಗಳಿಗೆಲ್ಲಾ ಗೋಚರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:21
18 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.


ಇದನ್ನು ನೋಡಿ ಆ ಅಷ್ಡೋದಿನ ಜನರು, “ಇಸ್ರಯೇಲ್ ದೇವರ ಮಂಜೂಷ ನಮ್ಮಲ್ಲಿರಬಾರದು; ಆತನ ಹಸ್ತ ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ,” ಎಂದು ಹೇಳಿ


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು