Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:22
10 ತಿಳಿವುಗಳ ಹೋಲಿಕೆ  

ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು