ಯೆಹೆಜ್ಕೇಲನು 39:25 - ಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು. ಅಧ್ಯಾಯವನ್ನು ನೋಡಿ |