Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:6
21 ತಿಳಿವುಗಳ ಹೋಲಿಕೆ  

ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ಪಡೆಪಡೆಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಪಡೆಪಡೆಯಾದ ತೋಗರ್ಮದವರನ್ನು, ಹೀಗೆ ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:


ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು