Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:9 - ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬೈಲಿಗೆ ಹೊರಟು ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರುಷಗಳ ತನಕ ಸುಡುತ್ತಲೇ ಬರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಬಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನ್ನು ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಬಾಣಗಳನ್ನು, ಗುರಾಣಿ, ಬರ್ಜಿ, ಗದೆಗಳನ್ನೆಲ್ಲಾ ಬೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನ್ನು ಸೌದೆಯಾಗಿ ಉಪಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:9
8 ತಿಳಿವುಗಳ ಹೋಲಿಕೆ  

ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು