Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:2 - ಕನ್ನಡ ಸತ್ಯವೇದವು C.L. Bible (BSI)

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:2
12 ತಿಳಿವುಗಳ ಹೋಲಿಕೆ  

ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ನಿಮ್ಮ ಫಲವತ್ತಾದ ತಗ್ಗುಪ್ರದೇಶಗಳು ರಥಗಳಿಂದ ತುಂಬಿರುವುವು. ಅಶ್ವದಳಗಳು ಪುರದ್ವಾರದ ಬಳಿ ಕಾವಲು ನಿಂತಿರುವುವು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು