Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:4 - ಕನ್ನಡ ಸತ್ಯವೇದವು C.L. Bible (BSI)

4 “ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ, ಇಸ್ರಾಯೇಲ್ ವಂಶದವರ ಅಧರ್ಮದ ಭಾರವು ಅದರ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆಮೇಲೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡಮಗ್ಗುಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ನಿನ್ನ ಎಡಗಡೆಯಲ್ಲಿ ಮಲಗಿ, ಇಸ್ರಾಯೇಲಿನ ಜನರ ಅಕ್ರಮಗಳನ್ನು ನಿಮ್ಮ ಮೇಲಿಡಬೇಕು. ನೀನು ಎಡಗಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ನಿಮ್ಮ ಮೇಲೆ ಹೊತ್ತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:4
11 ತಿಳಿವುಗಳ ಹೋಲಿಕೆ  

ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಮರುಭೂಮಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಅವರು ಎಷ್ಟು ವರ್ಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ, ಮುನ್ನೂರತೊಂಬತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇಮಿಸಿದ್ದೇನೆ; ಅಷ್ಟು ದಿವಸ ಇಸ್ರಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು