Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:17 - ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:17
22 ತಿಳಿವುಗಳ ಹೋಲಿಕೆ  

ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು


ತರುವಾಯ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡುಹೋದನು. ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.


ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಕ್ಷೇತ್ರವು ಅವರಿಗೆ ಸೊತ್ತಾಗುವುದು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.


ಆ ಕೊಠಡಿಗಳು ಒಂದರ ಮೇಲೆ ಮೇಲೊಂದು ಮೂರಂತಸ್ತಾಗಿದ್ದವು. ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ದೇವಸ್ಥಾನದ ಗೋಡೆಯನ್ನು ಮೆಟ್ಟಲು ಮೆಟ್ಟಲಾಗಿ ಕಟ್ಟಲಾಗಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಟಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.


ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.


ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ಆ ಕೆಳಗಣ ನೆಲೆಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲೂ ಹಾಸಲಾಗಿದ್ದ ಅವುಗಳಷ್ಟು ಅಗಲವಾಗಿತ್ತು.


ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.


ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ ದೀಕ್ಷಿತ ಯಾಜಕರ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಹತ್ತು ಮೀಟರ್ ಅಂತರವಿತ್ತು.


ಒಳಗಣ ಪ್ರಾಕಾರಕ್ಕೆ ಸೇರಿದ ಹತ್ತು ಮೀಟರ್ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶ ಇಪ್ಪತ್ತೈದು ಮೀಟರ್ ಅಗಲ. ಅಲ್ಲಿನ ಎರಡು ಸಾಲುಗಳ ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು.


ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.


“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು