Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:10 - ಕನ್ನಡ ಸತ್ಯವೇದವು C.L. Bible (BSI)

10 “ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:10
12 ತಿಳಿವುಗಳ ಹೋಲಿಕೆ  

ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.


“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!


ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.


ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು