Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:14 - ಕನ್ನಡ ಸತ್ಯವೇದವು C.L. Bible (BSI)

14 ನೆಲದ ಮೇಲೆ ಅಂದರೆ, ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಒಂದು ಮೀಟರ್, ಅದರ ಮೇಲಣ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್, ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ಎರಡು ಮೀಟರ್; ಮೇಲಿನ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲವು ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ನಾಲ್ಕು ಮೊಳ, ಮೇಲಣ ಬಿಡುವಿನ ಅಗಲವು ಒಂದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:14
5 ತಿಳಿವುಗಳ ಹೋಲಿಕೆ  

ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.


ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.


ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.


ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು