Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ [ಸಮಾಧಾನ] ಯಜ್ಞಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:11
13 ತಿಳಿವುಗಳ ಹೋಲಿಕೆ  

ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.


ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.


ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.


ಸರ್ವೇಶ್ವರ ಸ್ವಾಮಿ, ಮೋಶೆ - ಆರೋನರಿಗೆ ಹೀಗೆಂದು ಆಜ್ಞಾಪಿಸಿದರು:


ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.


ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು