Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:13 - ಕನ್ನಡ ಸತ್ಯವೇದವು C.L. Bible (BSI)

13 ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆದ್ದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನ್ನು ತರಕೂಡದು. ಅವರು ನನ್ನ ಪವಿತ್ರ ವಸ್ತುಗಳ ಬಳಿಗೂ, ಅತೀ ಪವಿತ್ರ ವಸ್ತುಗಳ ಬಳಿಗೂ ಬರಬಾರದು. ಅವರು ಮಾಡಿದ ಭಯಂಕರ ಕೃತ್ಯಗಳಿಗಾಗಿ ಅವರು ಅವಮಾನಿತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:13
8 ತಿಳಿವುಗಳ ಹೋಲಿಕೆ  

ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.


ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ಖಡ್ಗಹತರ ಮಧ್ಯೆ ಬೀಳು, ಕತ್ತಿಯನ್ನು ಎತ್ತಿಹಿಡಿಯಲಾಗಿದೆ. ಅಧೋಲೋಕದವರೇ, ಈಜಿಪ್ಟನ್ನು ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿ.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು