Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:17 - ಕನ್ನಡ ಸತ್ಯವೇದವು C.L. Bible (BSI)

17 ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:17
8 ತಿಳಿವುಗಳ ಹೋಲಿಕೆ  

ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು