Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:24 - ಕನ್ನಡ ಸತ್ಯವೇದವು C.L. Bible (BSI)

24 ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:24
16 ತಿಳಿವುಗಳ ಹೋಲಿಕೆ  

ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.


ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು