Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:5
17 ತಿಳಿವುಗಳ ಹೋಲಿಕೆ  

ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:


ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II


ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.


ಕೋಣೆಗಳ ಪ್ರಾಕಾರದ ಪೂರ್ವದಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಿನ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.


ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು.


ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.


ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು