Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:15 - ಕನ್ನಡ ಸತ್ಯವೇದವು C.L. Bible (BSI)

15 ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:15
15 ತಿಳಿವುಗಳ ಹೋಲಿಕೆ  

ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.


ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.


ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು