Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:2 - ಕನ್ನಡ ಸತ್ಯವೇದವು C.L. Bible (BSI)

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:2
18 ತಿಳಿವುಗಳ ಹೋಲಿಕೆ  

ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.


“ರಾಜನು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಲಿ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು.


ಅವನು ಪೂರ್ವದಲ್ಲೂ ಉತ್ತರದಲ್ಲೂ ಕೆಳಗೂ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಪ್ರಾಕಾರದ ಹೊರಗಡೆಯ ತನಕ ಅಳೆಯಲು ಐವತ್ತು ಮೀಟರ್ ಇತ್ತು.


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು