Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿವಿುನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:10
21 ತಿಳಿವುಗಳ ಹೋಲಿಕೆ  

“ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು.


ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II


‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.


ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು.


ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು.


“ನಿಮ್ಮ ನಾಡಿನ ಮೇರೆಗಳು ಹೀಗಿರಬೇಕು: ಉತ್ತರದ ಮೇಲೆ ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.


ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;


“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ದಾವೀದನು ಅಲ್ಲಿಂದ ಗುಡ್ಡ ಹತ್ತಿಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,


ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು.


ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.


ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಮರುಭೂಮಿಯಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.


ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.


ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


“ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು