Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:12 - ಕನ್ನಡ ಸತ್ಯವೇದವು C.L. Bible (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:12
11 ತಿಳಿವುಗಳ ಹೋಲಿಕೆ  

ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.


ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ಅಂಥವನು ಬಿಸಿಲಿನಲ್ಲೂ ಹಸಿರಾಗಿರುವ ಬಳ್ಳಿಯಂತೆ ಹರಡಿಕೊಳ್ಳುವನು ತೋಟದೊಳಗೆ ಕವಲೊಡೆದು;


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು