Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನ್ನೆರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:13
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.


ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:


ಇದು ಜೋಸೆಫನ ಮಕ್ಕಳಾದ ಮನಸ್ಸೆ-ಎಫ್ರಯಿಮ್ ಎಂಬ ಕುಲಗಳಿಗೆ ದೊರೆತ ಸೊತ್ತಿನ ಎಲ್ಲೆ.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು