Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:18 - ಕನ್ನಡ ಸತ್ಯವೇದವು C.L. Bible (BSI)

18 “ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:18
12 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!


ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.


ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು.


ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


‘ಪೂರ್ವದಿಕ್ಕಿನ ಮೇರೆಗಾಗಿ ಹಚೆರೇನಾನಿನಿ0ದ ಶೆಫಾಮಿಗೆ ಗುರುತು ಹಾಕಬೇಕು.


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು