Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:3 - ಕನ್ನಡ ಸತ್ಯವೇದವು C.L. Bible (BSI)

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಮೂಡಲಿಗೆ ಮುಂದರಿದು ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:3
12 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ.


ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.


ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು