Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:9 - ಕನ್ನಡ ಸತ್ಯವೇದವು C.L. Bible (BSI)

9 ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ತೊರೆಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿಬಾಳುವವು; ಮೀನುಗಳು ತಂಡೋಪತಂಡವಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು [ಆ ನೀರೂ] ಸಿಹಿಯಾಗುವದು; ಈ ತೊರೆಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:9
27 ತಿಳಿವುಗಳ ಹೋಲಿಕೆ  

ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಬಂಡೆಗಳಿಂದಲೆ ಹೊರಡಿಸಿದನು ನೀರನು I ನದಿಗಳಂತೆಯೆ ಹರಿಯಮಾಡಿದನು ಅದನು II


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು