Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:10 - ಕನ್ನಡ ಸತ್ಯವೇದವು C.L. Bible (BSI)

10 ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರದಲ್ಲಿ ಅದರ ಉದ್ದವು ಹನ್ನೆರಡುವರೆ ಕಿಲೋಮೀಟರ್, ಪಶ್ಚಿಮದಲ್ಲಿ ಅಗಲವು ಐದು ಕಿಲೋಮೀಟರ್, ಪೂರ್ವದಲ್ಲಿ ಅಗಲವು ಐದು ಕಿಲೋಮೀಟರ್, ಉತ್ತರದಲ್ಲಿ ಉದ್ದವು ಹನ್ನೆರಡುವರೆ ಕಿಲೋಮೀಟರ್. ಅದರ ಮಧ್ಯೆ ಸರ್ವೇಶ್ವರನ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು; ಬಡಗಲಲ್ಲಿ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಪಡುವಲಲ್ಲಿ ಅಗಲವು ಹತ್ತು ಸಾವಿರ ಮೊಳ, ಮೂಡಲಲ್ಲಿ ಅಗಲವು ಹತ್ತು ಸಾವಿರ ಮೊಳ, ತೆಂಕಲಲ್ಲಿ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:10
8 ತಿಳಿವುಗಳ ಹೋಲಿಕೆ  

ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.


“ಯಾಜಕರಿಗೆ ಇರುವ ಒಂದು ಸೊತ್ತು ಎಂದರೆ ನಾನೇ. ಇಸ್ರಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು. ನಾನೇ ಅವರಿಗೆ ಆಸ್ತಿ.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.


ನೀವು ಮೀಸಲು ಭೂಮಿಯಲ್ಲಿ ಸರ್ವೇಶ್ವರನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಐದು ಕಿಲೋಮೀಟರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು