Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:11 - ಕನ್ನಡ ಸತ್ಯವೇದವು C.L. Bible (BSI)

11 ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:11
13 ತಿಳಿವುಗಳ ಹೋಲಿಕೆ  

“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.


ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರ ಅತಿಪವಿತ್ರವೂ ನಾಡಿನಲ್ಲಿನ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು