Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:35 - ಕನ್ನಡ ಸತ್ಯವೇದವು C.L. Bible (BSI)

35 ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:35
33 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ನಿನ್ನ ಮಾರ್ಗ ದೇವಾ, ಪರಿಶುದ್ಧವಾದುದಯ್ಯಾ I ನಮ್ಮ ದೇವರಂತಹ ಮಹಾ ದೇವರಾರಯ್ಯಾ? II


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಪಶ್ಚಿಮದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು; ಮತ್ತೊಂದು ನಫ್ತಾಲಿ ಬಾಗಿಲು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು