Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:10 - ಕನ್ನಡ ಸತ್ಯವೇದವು C.L. Bible (BSI)

10 “ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:10
19 ತಿಳಿವುಗಳ ಹೋಲಿಕೆ  

ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.


ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!


ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು