Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಅವರು ಜನರನ್ನು ಎಚ್ಚರಿಸುವುದಕ್ಕಾಗಿ ತುತ್ತೂರಿಯನ್ನು ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:14
11 ತಿಳಿವುಗಳ ಹೋಲಿಕೆ  

ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು