Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:7 - ಕನ್ನಡ ಸತ್ಯವೇದವು C.L. Bible (BSI)

7 ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:7
16 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !


ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು