Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:11 - ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:11
31 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.


ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


“ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,


ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,


ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು,


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.


ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು