Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:6 - ಕನ್ನಡ ಸತ್ಯವೇದವು C.L. Bible (BSI)

6 ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:6
27 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಆ ಕಾಲದಲ್ಲಿ ನಾವು ಅವನ ಎಲ್ಲ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು, ಅವುಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು ಹಾಗು ಮಕ್ಕಳನ್ನು ನಿಶ್ಯೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು