Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:14
9 ತಿಳಿವುಗಳ ಹೋಲಿಕೆ  

ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ನಮ್ಮ ಮಡದಿ ಮಕ್ಕಳೂ ದನಕುರಿಗಳೂ ಇಲ್ಲೇ ಗಿಲ್ಯಾದ್ ನಾಡಿನ ಊರುಗಳಲ್ಲಿರಲಿ.


ನಿಮಗೆ ಬಹಳ ದನಕುರಿಗಳುಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಸರ್ವೇಶ್ವರ ಜೋರ್ಡನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ನಾಡು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಮಡದಿ ಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.


“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು