Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:18 - ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:18
14 ತಿಳಿವುಗಳ ಹೋಲಿಕೆ  

ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ,


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು