Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಅವರಿಗೆ - ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವದಕ್ಕೆ ಕೆಲವರನ್ನಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:18
8 ತಿಳಿವುಗಳ ಹೋಲಿಕೆ  

ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.


ಜನರು ಯೆಹೋಶುವನಿಗೆ, “ಆ ಐದುಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅವಿತುಕೊಂಡಿದ್ದಾರೆ,” ಎಂದು ತಿಳಿಸಿದರು.


ಅವರನ್ನು ಅವರ ನಗರಗಳಲ್ಲಿ ಸೇರಗೊಡಿಸಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರಲ್ಲವೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು