Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:2 - ಕನ್ನಡ ಸತ್ಯವೇದವು C.L. Bible (BSI)

2 ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:2
16 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು