Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:25 - ಕನ್ನಡ ಸತ್ಯವೇದವು C.L. Bible (BSI)

25 ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಏನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:25
13 ತಿಳಿವುಗಳ ಹೋಲಿಕೆ  

ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II


ಕೇಡು ಬಗೆಯುವವರು ನನ್ನ ಪ್ರಾಣಕೆ I ಇಳಿದು ಹೋಗುವರು ಅಧೋಲೋಕಕೆ II


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು