Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:39 - ಕನ್ನಡ ಸತ್ಯವೇದವು C.L. Bible (BSI)

39 ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:39
11 ತಿಳಿವುಗಳ ಹೋಲಿಕೆ  

ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ಅದಕ್ಕೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಗೆ ಈಡಾಗಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ. ನಗರವನ್ನೂ ಜನರನ್ನೂ ನಾಶಮಾಡಿದರು.


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.


ಅಲ್ಲಿಂದ ಯೆಹೋಶುವನು ಹಾಗು ಎಲ್ಲ ಇಸ್ರಯೇಲರು ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು