Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:16
16 ತಿಳಿವುಗಳ ಹೋಲಿಕೆ  

ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.


ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ :


ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.


ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು