Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:22
19 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಪಾಳೆಯದಿಂದ ಮಹಾ ಪರಾಕ್ರಮಿಯೊಬ್ಬನು ಹೊರಬಂದನು. ಅವನು ಗತ್ ಊರಿನವನು. ಅವನ ಹೆಸರು ಗೊಲ್ಯಾತ್. ಅವನ ಎತ್ತರ ಸುಮಾರು ಮೂರು ಮೀಟರ್.


ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;


ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.


ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.


ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ ದಾಗೋನನ ಗುಡಿಗೆ ಒಯ್ದರು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.


ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು