Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:1
24 ತಿಳಿವುಗಳ ಹೋಲಿಕೆ  

ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


ಇಸ್ರಯೇಲರು ಅವನ ಜನರನ್ನು ಸೋಲಿಸಿದರು, ಕತ್ತಿಯಿಂದ ಸಂಹರಿಸಿದರು. ಅರ್ನೋನ್ ಹೊಳೆಯಿಂದ ಯಬ್ಬೋಕ್ ಹೊಳೆಯವರೆಗೂ ಹಾಗೂ ಅಮ್ಮೋನಿಯರ ಎಲ್ಲೆಯವರೆಗೂ ಇದ್ದ ಸೀಹೋನನ ನಾಡನ್ನೆಲ್ಲಾ ಸ್ವಾಧೀನ ಮಾಡಿಕೊಂಡರು. ಅಮ್ಮೋನಿಯರ ಎಲ್ಲೆ ಒಂದು ದುರ್ಗವಾಗಿತ್ತು.


ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆ ಅಮೋರಿಯರ ಪ್ರದೇಶದಿಂದಾಚೆ ಇರುವ ಮರುಭೂಮಿಯಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋಬಾಬ್ಯರ ಎಲ್ಲೆಯಾಗಿದೆ.


ಮೋವಾಬಿನ ಮಹಿಳೆಯರು ಅರ್ನೊನ್ ನದಿಯ ಹಾಯ್ಗಡಗಳಲಿ, ಅಲೆಯುತಿಹರು ಗೂಡಿಂದ ಹೊರದೂಡಲಾದ ಹಕ್ಕಿಮರಿಗಳ ಪರಿ.


ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲ್ಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.


ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು.


ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.


ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಅವರ ನಾಡನ್ನು ಇಸ್ರಯೇಲರಿಗೆ ಕೊಟ್ಟಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಇಸ್ರಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳಿಸಿದರು.


ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧ ಸನ್ನದ್ಧರಾಗಿ ಕಾನಾನ್ ನಾಡಿಗೆ ಹೊರಡುತ್ತೇವೆ. ಜೋರ್ಡನ್ ನದಿಯ ಈಚೆಯೇ ನಮಗೆ ಆಸ್ತಿ ದೊರಕಬೇಕು,” ಎಂದು ಹೇಳಿದರು.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡಲು ಯಹಜಿಗೆ ಹೊರಟುಬಂದ.


“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.


ಮೋಶೆ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರ:


ಜೋರ್ಡನ್ ನದಿಯ ಆಚೆ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸ ಸೀಹೋನನ ದೇಶದಲ್ಲಿ ಇದು ನಡೆಯಿತು. ಮೋಶೆಯೂ ಇಸ್ರಯೇಲರೂ ಈಜಿಪ್ಟಿನಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ಉರಿಯನ ಮಗ ಗೆಬೆರ್ - ಗಿಲ್ಯಾದ (ಅಮೋರಿಯರ ಅರಸ ಸೀಹೋನ್, ಬಾಷಾನಿನ ಅರಸ ಓಗ್ ಇವರ ಪ್ರದೇಶ) ಪ್ರದೇಶಕ್ಕೆಲ್ಲಾ ಅವನೊಬ್ಬನೇ ಜಿಲ್ಲಾಧಿಕಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು