Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:1 - ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:1
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.


ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದ.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ಅಬ್ರಹಾಮನು ಮತ್ತು ಸಾರಳು ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟುನಿಂತುಹೋಗಿತ್ತು.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;


“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.


ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು.


ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು