Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:26 - ಕನ್ನಡ ಸತ್ಯವೇದವು C.L. Bible (BSI)

26 ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೆಷ್ಬೋನಿನಿಂದ ರಾಮತ್‍ಮಿಚ್ಪೆ, ಬೆಟೋನೀಮ್ ಎಂಬ ಊರುಗಳವರೆಗೂ ಇರುವ ಪ್ರದೇಶ, ಮಹನಯಿವಿುನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:26
14 ತಿಳಿವುಗಳ ಹೋಲಿಕೆ  

ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.


ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.


ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.


ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಬಿನ್ ಗೆಬೆರ್ - ರಾಮೋತ್ ಗಿಲ್ಯಾದ್ (ಗಿಲ್ಯಾದಿನಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಿದ್ದ ಅರ್ಗೋಬ ಪ್ರದೇಶ); ಇದ್ದೋವಿನ ಮಗ ಅಹೀನಾದಾಬನು - ಮಹನಯಿಮ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು