Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:27 - ಕನ್ನಡ ಸತ್ಯವೇದವು C.L. Bible (BSI)

27 ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೊರ್ದನ್ ತಗ್ಗಿನಲ್ಲಿರುವ ಬೇತ್‍ಹಾರಾಮ್, ಬೇತ್‍ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ಪಟ್ಟಣಗಳು, ಕಿನ್ನೆರೆತ್ ಸಮುದ್ರದ [ದಕ್ಷಿಣದಿಕ್ಕಿನ] ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಯೊರ್ದನ್ ಪೂರ್ವಪ್ರದೇಶ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:27
14 ತಿಳಿವುಗಳ ಹೋಲಿಕೆ  

ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.


ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.


ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ


ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.


ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,


ಈ ಎಲ್ಲ ಗ್ರಾಮನಗರಗಳು ಗಾದ್ ಕುಲದ ಆಸ್ತಿಪಾಸ್ತಿ ಆದವು.


ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು