Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:31 - ಕನ್ನಡ ಸತ್ಯವೇದವು C.L. Bible (BSI)

31 ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:31
14 ತಿಳಿವುಗಳ ಹೋಲಿಕೆ  

ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.


ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಮೋಶೆ ಜೋರ್ಡನಿನ ಆಚೆ ಜೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲು ಪ್ರದೇಶದಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವಂತ ಆಸ್ತಿಯಾಗಿ ಕೊಟ್ಟನು.


ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.


ಗೇರ್ಷೋಮ ಗೋತ್ರದ ಕುಟುಂಬಗಳಿಗೆ ಫಲವತ್ತಾದ ಪ್ರದೇಶಗಳೊಂದಿಗೆ ಕೊಡಲಾದ ಪಟ್ಟಣಗಳು: ಪಶ್ಚಿಮ ಮನಸ್ಸೆ ಪ್ರದೇಶದಲ್ಲಿದ್ದ ಬಾಷಾನಿನ ಗೋಲಾನ್ ಮತ್ತು ಅಷ್ಟಾರೋಟ್;


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II


ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.


ಗಿಲ್ಯಾದರು ಉಳಿದರು ಜೋರ್ಡನಿನ ಆಚೆಯಲ್ಲೇ ದಾನ್ ಕುಲದವರು ಉಳಿಯರೇಕೆ, ಹಡಗುಗಳಲ್ಲೇ? ಅಶೇರ್ ಕುಲದವರೋ ಅಂಟುಕೊಂಡರು ತಮ್ಮ ರೇವುಗಳಿಗೇ ನೆಮ್ಮದಿಯಾಗಿ ಕೂತುಬಿಟ್ಟರು ಸಮುದ್ರತೀರದಲ್ಲೆ.


ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು