Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:8 - ಕನ್ನಡ ಸತ್ಯವೇದವು C.L. Bible (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:8
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.


ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು.


“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು;


ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು