Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:9 - ಕನ್ನಡ ಸತ್ಯವೇದವು C.L. Bible (BSI)

9 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:9
15 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,


ಗಿಲ್ಯಾದ್ ಮೊದಲುಗೊಂಡು (ದಕ್ಷಿಣ ಕಡೆಯಲ್ಲಿ) ಅರ್ನೋನ್ ತಗ್ಗಿನವರೆಗೂ (ಪೂರ್ವ ಕಡೆಯಲ್ಲಿ) ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆ. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ದಕ್ಷಿಣ ಎಲ್ಲೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಪೂರ್ವದಿಕ್ಕಿನ ಎಲ್ಲೆ.


“ಆ ಕಾಲದಲ್ಲಿ ನಾವು ಆ ನಾಡನ್ನೆಲ್ಲ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.


ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು;


ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,


ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು.


ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;


ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು