Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:9 - ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆಯು ಆ ದಿವಸ - ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಹೊಂದಿಕೊಂಡದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವಾಸ್ತ್ಯವಾಗುವದು ಎಂದು ಪ್ರಮಾಣಮಾಡಿ ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಮೋಶೆಯು ಅಂದು ನನಗೆ, ‘ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:9
8 ತಿಳಿವುಗಳ ಹೋಲಿಕೆ  

ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.


‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.


ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು